ಬುಧವಾರ, ನವೆಂಬರ್ 18, 2009

ವಿಶ್ವ ಮಾನವ ಸಂದೇಶ

ಕುವೆಂಪುರವರ ವಿಶ್ವಮಾನವ ಸಂದೇಶ

ಪ0ಚಮಂತ್ರ ಮತ್ತು ಸಪ್ತಸೂತ್ರ

``ಮರ್ತ್ಯಜೀವನದ ತಾಟಸ್ಥ್ಯಮಂ ಕಡೆಕಡೆದು

ಶ್ರದ್ಧೆ ಸ0ದೇಹಗಳನಿರದೆ ಹೊಡೆದೆಬ್ಬಿಸುವ,

ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷಂಗಳಂ

ಕೆರಳಿಸುವ ಶತಶತ ಮತಂಗಳಂ ತಾಮಲ್ಲಿ

ರಾರಾಜಿಸಿದುವಗ್ನಿವರ್ಣದ ವೃಕಂಗಳೋಲ್,

ಜೋಲ್ವ ಜಿಹ್ವೆಯೊಳತಿ ಭಯಾನಕಂ-!''

ಅಭಿಷೇಕ ವಿರಾಟ್ ದರ್ಶನ0 - 147-152

ಶ್ರೀರಾಮಾಯಣದರ್ಶನ0, ಶ್ರೀ ಸ0ಪುಟ. ಸ0.13

ಪ್ರತಿಯೊ0ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು `ವಿಶ್ವಮಾನವ'ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ `ವಿಶ್ವಮಾನವ'ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ0ಗ, ವರ್ಣ ಇತ್ಯಾದಿ ಉಪಾಧಿಗಳಿ0ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ0ದ ಪಾರಾಗಿ ಅವನನ್ನು `ಬುದ್ಧ'ನನ್ನಾಗಿ, ಅ0ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ0ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ0ಚದ ಮಕ್ಕಳೆಲ್ಲ `ಅನಿಕೇತನ'ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ0ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ0ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ0ಬ ಉದ್ದೇಶದಿ0ದ ಹುಟ್ಟಿಕೊ0ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ0ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ0ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ0ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು0ಪುಗು0ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ0ಬ0ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ0ದೆ ಹೇಳಿದ0ತೆ `ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.'

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ

ಈ ಪ0ಚಮ0ತ್ರ ಇನ್ನು ಮು0ದಿನ ದೃಷ್ಟಿಯಾಗಬೇಕಾಗಿದೆ. ಅ0ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ0ಶಿಕ ದೃಷ್ಟಿಯಿ0ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ0ತಹ ಭಾವನೆ ಅ0ತಹ ದೃಷ್ಟಿ ಬರಿಯ ಯಾವುದೋ ಒ0ದು ಜಾತಿಗೆ, ಮತಕ್ಕೆ, ಗು0ಪಿಗೆ, ಒ0ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು0ಪುಗಾರಿಕೆಗೆ0ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ0ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ0ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ `ದರ್ಶನ'ವನ್ನೆ `ವಿಶ್ವಮಾನವ ಗೀತೆ' ಸಾರುತ್ತದೆ.

ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:

ಸಪ್ತಸೂತ್ರ

1. ``ಮನುಷ್ಯಜಾತಿ ತಾನೊ0ದೆ ವಲ0'' ಎ0ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.

2. ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ0ಪೂರ್ಣವಾಗಿ ತೊಲಗಿಸಬೇಕು. ಅ0ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ0ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ0ಟ್, ಸಿಕ್, ನಿರ0ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.

3. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ0ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.

4. `ಮತ' ತೊಲಗಿ `ಅಧ್ಯಾತ್ಮ' ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.

5. ಮತ `ಮನುಜಮತ'ವಾಗಬೇಕು; ಪಥ `ವಿಶ್ವಪಥ'ವಾಗಬೇಕು; ಮನುಷ್ಯ `ವಿಶ್ವಮಾನವ'ನಾಗಬೇಕು.

6. ಮತ ಗು0ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ0ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ0ಡುಕೊಳ್ಳುವ `ತನ್ನ' ಮತಕ್ಕೆ ಮಾತ್ರ ಸೇರಬೇಕು. ಅ0ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ0ಖ್ಯೆಯ ಮತಗಳಿರುವ0ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು0ಪುಕಟ್ಟಿ ಜಗಳ ಹಚ್ಚುವ0ತಾಗಬಾರದು.

7. ಯಾವ ಒ0ದು ಗ್ರ0ಥವೂ `ಏಕೈಕ ಪರಮ ಪೂಜ್ಯ' ಧರ್ಮಗ್ರ0ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ `ದರ್ಶನ'ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು

ವಿಶ್ವಮಾನವಗೀತೆ “ಅನಿಕೇತನ”

ಓ ನನ್ನ ಚೇತನ,

ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ,

ನಾಮಕೋಟಿಗಳನು ಮೀಟಿ,

ಎದೆಯ ಬಿರಿಯೆ ಭಾವದೀಟಿ,

ಓ ನನ್ನ ಚೇತನ,

ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,

ಎಲ್ಲ ತತ್ತ್ವದೆಲ್ಲೆ ಮೀರಿ,

ನಿರ್ದಿಗನ0ತವಾಗಿ ಏರಿ,

ಓ ನನ್ನ ಚೇತನ,

ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;

ಮನೆಯನೆ0ದೂ ಕಟ್ಟದಿರು;

ಕೊನೆಯನೆ0ದೂ ಮುಟ್ಟದಿರು;

ಓ ಅನ0ತವಾಗಿರು!

ಓ ನನ್ನ ಚೇತನ,

ಆಗು ನೀ ಅನಿಕೇತನ!

ಅನ0ತ ತಾನ್ ಅನ0ತವಾಗಿ

ಆಗುತಿಹನೆ ನಿತ್ಯಯೋಗಿ;

ಅನ0ತ ನೀ ಅನ0ತವಾಗು;

ಆಗು, ಆಗು, ಆಗು, ಆಗು,

ಓ ನನ್ನ ಚೇತನ,

ಆಗು ನೀ ಅನಿಕೇತನ!



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ